ಸನ್ಮಾರ್ಗ ವಾರ್ತೆ
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ರಾಷ್ಟ್ರಪತಿ ರಾಮನಾಥ್ ಕೋವಿಂದ್ರವರ ಭಾಷಣವು ಅತ್ಯಂತ ಶಕ್ತಿಶಾಲಿಯಾಗಿತ್ತು ಮತ್ತು ಕೆಲವರ ಅನುಪಸ್ಥಿತಿಯಲ್ಲಿಯೂ ಅವರ ಭಾಷಣವು ಬಹಳ ಪರಿಣಾಮ ಬೀರಿದೆ ಎಂದು ಹೇಳಿದರು.
ಕಳೆದ ವಾರ ನಿರ್ಧರಿಸಿದಂತೆ ರೈತರ ಪ್ರತಿಭಟನೆ ಬಗ್ಗೆ 15 ಗಂಟೆಗಳ ಚರ್ಚೆ ಮುಗಿದಿದ್ದು, ರಾಜ್ಯಸಭೆಯಲ್ಲಿ 50 ಸಂಸದರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಪ್ರಶ್ನಾವಳಿ ಅವಧಿ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದರು.
ರಾಷ್ಟ್ರಪತಿಗಳು ಹೇಳಿದಂತೆ ಭಾರತ ನಿಜಕ್ಕೂ ಅವಕಾಶಗಳ ನೆಲ. ಹಲವಾರು ಅವಕಾಶಗಳು ನಮ್ಮನ್ನು ಕಾಯುತ್ತಿವೆ. ಆದ್ದರಿಂದ ಯುವ ಉತ್ಸಾಹದಿಂದ ತುಂಬಿರುವ ರಾಷ್ಟ್ರ ಮತ್ತು ಕನಸುಗಳನ್ನು ಸಾಕಾರಗೊಳಿಸುವ ಪ್ರಯತ್ನಗಳನ್ನು ಮಾಡುತ್ತಿರುವ ರಾಷ್ಟ್ರ. ಈ ಅವಕಾಶಗಳನ್ನು ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಅವರು ಹೇಳಿದರು.
#WATCH LIVE: PM Modi replies in Rajya Sabha to the Motion of Thanks on the President’s Address.(Source: Rajya Sabha TV) https://t.co/FkIpRmd9kN
— ANI (@ANI) February 8, 2021