ಸನ್ಮಾರ್ಗ ವಾರ್ತೆ
ಲಕ್ನೊ: ಗಣರಾಜ್ಯೋತ್ಸವ ದಿನದಂದು ರೈತರ ಟ್ರಾಕ್ಟರ್ ಪರೇಡ್ ನಡುವೆ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಮೃತಪಟ್ಟಿರುವ ರೈತನ ಮನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದರು. ಉತ್ತರ ಪ್ರದೇಶದ ರಾಮ್ಪುರದ ನವ್ರೀತ್ ಸಿಂಗ್ ಗಣರಾಜ್ಯೋತ್ಸವ ದಿನದಲ್ಲಿ ಮೃತಪಟ್ಟಿದ್ದರು.
ಮನೆಗೆ ಭೇಟಿ ನೀಡಿದ ಪ್ರಿಯಾಂಕಾ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರಿಯಾಂಕಾ ಗಾಂಧಿ , ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಅವರ ಜೊತೆಗಿದ್ದರು. ಪ್ರಿಯಾಂಕಾರ ಜೊತೆಯಲ್ಲಿದ್ದ ಬೆಂಗಾವಲು ವಾಹನ ಢಿಕ್ಕಿಯಾದ್ದರಿಂದ ಕೆಲವು ಹೊತ್ತು ಪ್ರಯಾಣಕ್ಕೆ ಅಡ್ಡಿಯಾಗಿತ್ತು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕಾ, ಮೃತರ ಕುಟುಂಬ ಸದಸ್ಯರು ಪ್ರಕರಣದ ನ್ಯಾಯಾಂಗ ತನಿಖೆಗೆ ಬಯಸುತ್ತಾರೆ ಎಂದು ತಿಳಿಸಿದ್ದಾರೆ.