ರಾಹುಲ್ ಗಾಂಧಿಯ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ: ಸಿದ್ದರಾಮಯ್ಯ

0
140

ಸನ್ಮಾರ್ಗ ವಾರ್ತೆ

ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಎಕ್ಸ್‌ ತಾಣದಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.

“ನಮ್ಮ ನಾಯಕ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ” ಎಂದು ಕುಟುಕಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವವರೆಗೆ ನಾವು ವಿರಮಿಸುವುದಿಲ್ಲ” ಎಂದು ತಿಳಿಸಿದ್ದಾರೆ.