ಇಂದು ಸಂಜೆ ಚರ್ಚೆಗೆ ತಯಾರು ಎಂದ ಕೇಂದ್ರ ಸರಕಾರ: ಎಲ್ಲ ರೈತ ಸಂಘಟನೆಗಳನ್ನು ಆಹ್ವಾನಿಸುವಂತೆ ರೈತರ ಪಟ್ಟು

0
343

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ,ಡಿ.1: ಕೇಂದ್ರ ಸರಕಾರದ ಕೃಷಿ ಕಾನೂನು ವಿರುದ್ಧ ಪ್ರತಿಭಟಿಸುತ್ತಿರುವ ರೈತರೊಂದಿಗೆ ಮಂಗಳವಾರ ಸಂಜೆ ಮೂರು ಗಂಟೆಗೆ ಕೇಂದ್ರ ಸರಕಾರ ಚರ್ಚೆಗೆ ಕರೆದಿದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಚರ್ಚೆಗೆ ನೇತೃತ್ವ ನೀಡಲಿದ್ದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತುತ ಇತರ ಕೆಲವು ಸಚಿವರು, ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ. ದಿಲ್ಲಿ ವಿಜ್ಞಾನ ಭವನದಲ್ಲಿ ಚರ್ಚೆ ನಡೆಯಲಿದೆ.

ಇದೇವೇಳೆ, ಪ್ರತಿಭಟನೆಯಲ್ಲಿ ಭಾಗವಹಿಸುವ ಕೆಲವು ಸಂಘಟನೆಗಳನ್ನು ಮಾತ್ರ ಚರ್ಚೆಗೆ ಕರೆದಿದ್ದು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. 500ರಷ್ಟು ರೈತ ಸಂಘಟನೆಗಳು ಇವೆ. ಇವುಗಳಲ್ಲಿ 32 ಮಂದಿಯನ್ನು ಮಾತ್ರ ಚರ್ಚೆಗೆ ಕರೆಯಲಾಗಿದೆ. ಎಲ್ಲ ರೈತ ಸಂಘಟನೆಗಳನ್ನು ಚರ್ಚೆಗೆ ಕರೆಯದೆ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕೆಲವು ಸಂಘಟನೆಗಳು ತಿಳಿಸಿವೆ. ಚರ್ಚೆಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ವಿಷಯವನ್ನು ರೈತರು ಸಭೆ ಸೇರಿ ನಿರ್ಧರಿಸಿಲಿದ್ದಾರೆ.