ದಿಶಾ ರವಿ ಬಿಡುಗಡೆಗೆ ವೆಲ್ಫೇರ್ ಪಾರ್ಟಿ ಆಗ್ರಹ

0
401
ಹಬೀಬುಲ್ಲಾ ಖಾನ್, ವೆಲ್ಫೇರ್ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಸನ್ಮಾರ್ಗ ವಾರ್ತೆ

ಬೆಂಗಳೂರು: ‘ರೈತರ ಆಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ದೇಶದ್ರೋಹದ ಆರೋಪದ ಮೇಲೆ ದೆಹಲಿ ಪೊಲೀಸರು ಬಂಧಿಸಿರುವ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.

‘ದಿಶಾ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿ ಜೈಲಿಗೆ ಹಾಕಿರುವುದು ಪ್ರಜಾಪ್ರಭುತ್ವದ ನಿಯಮ‌ಗಳ ಉಲ್ಲಂಘನೆಯಾಗಿದೆ’ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್ ಆರೋಪಿಸಿದ್ದಾರೆ.

‘ಜನಪರ ಹೋರಾಟಗಾರಾರು, ಪತ್ರಕರ್ತರು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಅಂತರ ರಾಷ್ಟ್ರೀಯ ಮಟ್ಟದ ಗೌರವವುಳ್ಳ ವ್ಯಕ್ತಿಗಳ ವಿರುದ್ಧ ಪೊಲೀಸರ ಕ್ರಮ ಮತ್ತು ಸೈಬರ್ ದಾಳಿಗಳು ಮೂಲಭೂತ ಹಕ್ಕುಗಳ ಮೇಲಿನ ದೌರ್ಜನ್ಯವಾಗಿವೆ’ ಎಂದಿದ್ದಾರೆ.