ಸನ್ಮಾರ್ಗ ವಾರ್ತೆ
ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯವನ್ನು ತಡೆಯಲು ಸರ್ಕಾರದಿಂದ ಕ್ಷೌರದಂಗಡಿ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕ್ಷೌರದಂಗಡಿಗಳನ್ನು ತೆರೆಯಲು ಮುಂದಾಗಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಸಿಎಂ ಬಿ.ಎಸ್ ಯಡಿಯೂರಪ್ಪ ರವರಿಗೆ ಪ್ರಸ್ತಾವನ್ನು ಸಲ್ಲಿಸಿದೆ.
ರಾಜ್ಯದ ವಿವಿಧೆಡೆ ಎಸ್ಸಿ-ಎಸ್ಟಿ ಜನರಿಗೆ ಕ್ಷೌರ ಮಾಡಲು ನಿರಾಕರಿಸಲಾಗುತ್ತಿದೆ. ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. ಇದರಿಂದಾಗಿ ದೌರ್ಜನ್ಯವನ್ನು ತಡೆಯಲು ಸರ್ಕಾರದಿಂದ ಕ್ಷೌರದಂಗಡಿ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.
ಈ ಕುರಿತು ಸಿಎಂ ನೇತೃತ್ವದಲ್ಲಿ ಚರ್ಚೆ ನಡೆಯಲಿದ್ದು, ಶೀಘ್ರವೇ ಸರಕಾರ ಕ್ಷೌರದಂಗಡಿಯನ್ನು ಆರಂಭಿಸುವ ಸಾಧ್ಯತೆ ಇದೆ.