ಶೈಕ್ಷಣಿಕ ಕಾರ್ಯಗಾರದ ಮೇಲೆ ದಾಳಿ ನಡೆಸಿದ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಿ: ಎಸ್.ಐ.ಓ ಆಗ್ರಹ

0
151

ಸನ್ಮಾರ್ಗ ವಾರ್ತೆ

ಮಂಗಳೂರು: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಶನ್ ವೈಟಲ್ ಫಾರ್ SSLC ಮತ್ತು PUC ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಗಾರದ ಮೇಲೆ ದಾಳಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವಂತೆ ಎಸ್‌.ಐ.ಒ ಬಲವಾಗಿ ಆಗ್ರಹಿಸಿದೆ. ಕಾರ್ಯಗಾರದಲ್ಲಿ ಕೋಮುಗಲಭೆ ಪ್ರಚೋದಿಸುವ ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂಬ ಆರೋಪಗಳು ವಾಸ್ತವಕ್ಕೆ ದೂರವಾಗಿದ್ದು, ಸಮಾಜದಲ್ಲಿ ದ್ವೇಷ ಹರಡುವ ಪ್ರಯತ್ನವಾಗಿದೆ.

ಸಮಾಜೋನ್ನತಿಯ ಉದ್ದೇಶದಿಂದ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ನಮ್ಮ ಬೆಂಬಲವಿದೆ. ನ್ಯಾಯಯುತವಾದ ಮತ್ತು ಸಮಗ್ರ ತನಿಖೆ ನಡೆಯಬೇಕು ಮತ್ತು ತಪ್ಪಿಸ್ತರನ್ನು ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ.

ಸಮಾಜದಲ್ಲಿ ಸುಳ್ಳು ಮಾಹಿತಿ ಮತ್ತು ದ್ವೇಷವನ್ನು ಹರಡುವ ಶಕ್ತಿಗಳನ್ನು ಸೋಲಿಸಲು ಮತ್ತು ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತವು ಕ್ರಮಕೈಗೊಳ್ಳಬೇಕು ಎಂದು ಎಸ್‌ಐಓ ಆಗ್ರಹಿಸಿದೆ.