ವಿಷಾಹಾರ ಸೇವನೆ ಪ್ರಕರಣ| ಹಾಸ್ಟೆಲ್‌ ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಕ್ರಮ ಜರುಗಿಸಿ: ಎಸ್‌.ಐ.ಓ ಆಗ್ರಹ

0
184

ಸನ್ಮಾರ್ಗ ವಾರ್ತೆ

ಮಂಗಳೂರು: ಸಿಟಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ರಾತ್ರಿ ತಮ್ಮ ಹಾಸ್ಟೆಲ್ ಮೆಸ್ಸಿನಲ್ಲಿ ಬಡಿಸಲಾದ ವಿಷಪೂರಿತ ಆಹಾರ ಸೇವಿನೆಯಿಂದಾಗಿ ಹಲವು ಆಸ್ಪತ್ರೆಗಳಲ್ಲಿ ನರಳುತ್ತಿದ್ದಾರೆ. ಈ ಹಿಂದೆ ಹಾಸ್ಟೆಲ್‌‌ನ ಆಡಳಿತ ಮಂಡಳಿಗೆ ಅವ್ಯವಸ್ಥೆಗಳ ಬಗ್ಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ರೀತಿಯ ಪರಿಹಾರ ಸಿಕ್ಕಿರಲಿಲ್ಲ.

ಈ ದುರ್ಘಟನೆಯ ಕುರಿತು ಸಮಗ್ರ ತನಿಖೆ ನಡೆಯಬೇಕಿದೆ ಹಾಗೂ ಹಾಸ್ಟೆಲ್ ಆಡಳಿತ ಮಂಡಳಿಯ ನಿರ್ಲಕ್ಷಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಎಸ್‌.ಐ.ಒ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಜವಾಬ್ದಾರಿಯುತ ಅಧಿಕಾರಿಗಳು ಅಸ್ವಸ್ಥ ವಿದ್ಯಾರ್ಥಿಗಳಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಸಂಬಂಧಪಟ್ಟ ವಿದ್ಯಾರ್ಥಿಗಳ ಆಸ್ಪತ್ರೆ ಬಿಲ್‌ಗಳನ್ನು ಆಡಳಿತ ಮಂಡಳಿಯಿಂದಲೇ ಭರಿಸಬೇಕು. ಭವಿಷ್ಯದಲ್ಲು ಇಂತಹ ದುರ್ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಎಸ್‌ಐಓ ಆಗ್ರಹಿಸಿದೆ.