ಬೆಡ್​ ಸಿಗದೆ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಬಿಜೆಪಿಯ ಮಾಜಿ ಸಂಸದನ ಪುತ್ರ

0
525

ಸನ್ಮಾರ್ಗ ವಾರ್ತೆ

ಲಖನೌ: ತುರ್ತು ವಾರ್ಡ್​ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಿಜೆಪಿಯ ಮಾಜಿ ಸಂಸದರೊಬ್ಬರು ತಮ್ಮ ಮಗನನ್ನು ಕಳೆದುಕೊಂಡಿರುವ ಘಟನೆ ಲಖನೌನ ಎಸ್ ಜಿ ಪಿ ಜಿ ಐ ಆಸ್ಪತ್ರೆಯಲ್ಲಿ ನಡೆದಿದೆ.

ವೈದ್ಯರನ್ನು ಅಮಾನತುಗೊಳಿಸುವವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ತಂದೆ ಮಗನ ಮೃತ ದೇಹದೊಂದಿಗೆ ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಯ ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಅವರ ಪುತ್ರ, ಪ್ರಕಾಶ್ ಮಿಶ್ರಾ (41) ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ನಿನ್ನೆ ರಾತ್ರಿ 11 ಗಂಟೆಗೆ ಎಸ್ ಜಿ ಪಿ ಜಿ ಐ (SGPGI) ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಯಾವುದೇ ಹಾಸಿಗೆ ಲಭ್ಯವಿಲ್ಲ ಮತ್ತು ತುರ್ತು ವೈದ್ಯಕೀಯ ಅಧಿಕಾರಿ ಸಹಾಯಕ್ಕೆ ಮುಂದಾಗಲಿಲ್ಲ ಮಗ ಸ್ವಲ್ಪ ಸಮಯದ ನಂತರ ನಿಧನರಾದರು.

ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ನನ್ನ ನಂತರ ಬಂದ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ಆದರೆ ನನಗೆ ಸಾಲಿನಲ್ಲಿ ನಿಲ್ಲಲು ಹೇಳಿದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ಅವನ ಬಗ್ಗೆ ದೂರು ನೀಡುತ್ತಿದ್ದರು. ಅವನಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಸಂಸದ ಪ್ರಸಾದ್ ಮಿಶ್ರಾ ಆಗ್ರಹಿಸಿದ್ದಾರೆ.