ಸನ್ಮಾರ್ಗ ವಾರ್ತೆ
ದೆಹಲಿ: ದೇಶದ 24ನೇ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಸುಶೀಲ್ ಚಂದ್ರ ರವರು ಇಂದು ಅಧಿಕಾರ ವಹಿಸಿಕೊಂಡರು.
ಸುಶೀಲ್ ಚಂದ್ರರವರು ಈ ಹಿಂದೆ ಚುನಾವಣಾ ಆಯುಕ್ತರಾಗಿದ್ದ ಸುನಿಲ್ ಅರೋರಾ ನಿವೃತ್ತರಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೋಮವಾರ ನೇಮಕ ಮಾಡಿ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.
ಮೇ 14, 2022 ರಂದು ಅಧಿಕಾರ ಕೊನೆಗೊಳ್ಳುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್ ಮತ್ತು ಮಣಿಪುರ ರಾಜ್ಯದ ವಿಧಾನಸಭಾ ಚುನಾವಣೆ ನಡೆಸುವ ಹೊಣೆ ಸದ್ಯ ಇವರ ಮೇಲಿದೆ.
ಹಿರಿಯ ಚುನಾವಣಾಧಿಕಾರಿ ಯಾಗಿರುವ ಸುಶೀಲ್ ಚಂದ್ರ ರವರು, ವಿವಿಧ ಚುನಾವಣೆಗಳ ಸಮಯದಲ್ಲಿ ಕಪ್ಪು ಹಣದ ಚಲಾವಣೆಯನ್ನು ತಡೆಯುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ.