ಸನ್ಮಾರ್ಗ ವಾರ್ತೆ
ಪಣಜಿ: ತೆಹಲ್ಕಾ ನಿಯತಕಾಲಿಕದ ಸಂಸ್ಥಾಪಕ ತರುಣ್ ತೇಜ್ಪಾಲ್ ಅವರನ್ನು ಗೋವಾ ನ್ಯಾಯಾಲಯವು ಅತ್ಯಾಚಾರ ಆರೋಪದಿಂದ ಖುಲಾಸೆಗೊಳಿಸಿದೆ. ಜಾಮೀನಿನ ಮೇಲೆ ಹೊರ ಬಂದಿರುವ ತೇಜ್ಪಾಲ್, 2013 ರಲ್ಲಿ ಗೋವಾದ ಪಂಚತಾರಾ ರೆಸಾರ್ಟ್ನಲ್ಲಿ ನಡೆದ ಸಮಾವೇಶದ ಬಳಿಕ ಕಿರಿಯ ಸಹೋದ್ಯೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದರು.
2017 ರಲ್ಲಿ ನ್ಯಾಯಾಲಯವು ತೇಜ್ ಪಲ್ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿಸಲು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ತರುಣ್ ತೇಜ್ಪಾಲ್ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿ ಈ ಆರೋಪಗಳ ವಿರುದ್ಧ ಪ್ರಶ್ನಿಸಿದ್ದರು. ಬಳಿಕ ಸುಪ್ರೀಂ ವಿಚಾರಣೆಯನ್ನು ಆರು ತಿಂಗಳೊಳಗೆ ಮುಕ್ತಾಯಗೊಳಿಸಬೇಕು ಎಂದು ಗೋವಾ ನ್ಯಾಯಾಲಯಕ್ಕೆ ಹೇಳಿತ್ತು.