ಉಡುಪಿ: ಇಸ್ಲಾಮಿಕ್ ವೆಲ್ಫೇರ್ ಸೊಸೈಟಿ ಮಹಾಸಭೆ

0
517

ಸನ್ಮಾರ್ಗ ವಾರ್ತೆ

ಉಡುಪಿ: ಇಸ್ಲಾಮಿಕ್ ವೆಲ್ಫೇರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ನಿ.) ಇದರ 2018-19 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24 ರಂದು ಉಡುಪಿ ಜಾಮಿಯಾ ಮಸೀದಿಯ ಸಭಾಂಗಣದಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷರಾದ ಅಕ್ಬರ್ ಅಲಿ ಅವರು ಸೊಸೈಟಿಯ ಬಡ್ಡಿ ರಹಿತ ಸೇವೆ ಹಾಗೂ ಸಮಾಜಪರ ಚಟುವಟಿಕೆಗಳ ಕಡೆಗೆ ಬೆಳಕು ಚೆಲ್ಲಿದರು. ಸಲಹೆಗಾರರಾದ ನರಸಿಂಹ ಸ್ವಾಮಿ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮವು ಹಾಫಿಝ್ ಯೂನುಸ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಸೊಸೈಟಿಯ ನಿರ್ದೇಶಕರಾದ ಅನ್ವರ್ ಅಲಿ ಕಾಪು ಸ್ವಾಗತಿಸಿದರು. ಇನ್ನೋರ್ವ ನಿರ್ದೇಶಕ ನಿಸಾರ್ ಅಹ್ಮದ್ ಸೂಚನಾ ಪತ್ರವನ್ನು ಓದಿ ಹೇಳಿದರು. ಕಾರ್ಯದರ್ಶಿ ಮುಹಮ್ಮದ್ ಆರಿಫ್ ವರದಿ ಹಾಗೂ ಯೋಜನೆಗಳನ್ನು ಸಭೆಯ ಮುಂದಿಟ್ಟರು. ನಿರ್ದೇಶಕರಾದ ರಿಯಾಝ್ ಅಹ್ಮದ್ ಕುಕ್ಕಿಕಟ್ಟೆ ಧನ್ಯವಾದ ಅರ್ಪಿಸಿದರು. ಮತ್ತೋರ್ವ ನಿರ್ದೇಶಕ ಜಿ.ಎಂ. ಶರೀಫ್ ಹೂಡೆ ಕಾರ್ಯಕ್ರಮ ನಿರೂಪಿಸಿದರು.