ಉ.ಪ್ರದೇಶ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಣ ಹಂಚಿದ ವಿಡಿಯೋ ವೈರಲ್: ಆರೋಪ ನಿರಾಕರಣೆ

0
933

ಸನ್ಮಾರ್ಗ ವಾರ್ತೆ

ಉತ್ತರ ಪ್ರದೇಶದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಪಾ ಶಂಕರ್ ಅವರು ಹಣ ಹಂಚಿದ ವಿವಾದಕ್ಕೆ ಗುರಿಯಾಗಿದ್ದಾರೆ. ಈ ಬಗ್ಗೆ ದೃಶ್ಯಗಳು ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಹಂಚಿಕೆ ಯಾಗುತ್ತಿದೆ. ಆದರೆ ಅವರು ಅದನ್ನು ನಿರಾಕರಿಸಿದ್ದಾರೆ. ಆ ದೃಶ್ಯದ ಹಿನ್ನೆಲೆ ಬೇರೆ ಎಂದು ಅವರು ಹೇಳಿದ್ದಾರೆ.

ಉತ್ತರಪ್ರದೇಶದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೃಪಾಶಂಕರ್ ಅವರು ಈ ಆರೋಪವನ್ನು ನಿರಾಕರಿಸಿದ್ದು,
ತಾನು ಮತದಾರರಿಗೆ ತನ್ನ ವಿಸಿಟಿಂಗ್ ಕಾರ್ಡ್ ನೀಡಿರುವುದಾಗಿ ಸಮರ್ಥಿಸಿಕೊಂಡಿದ್ದಾರೆ. ಇದು ಷಡ್ಯಂತ್ರವಾಗಿದ್ದು, ತನ್ನನ್ನು ಸಿಲುಕಿಸಲು ಈ ಅಪಪ್ರಚಾರ ಮಾಡಲಾಗಿದೆ ಎಂದವರು ಹೇಳಿದ್ದಾರೆ.

ಉತ್ತರಪ್ರದೇಶದ ಕದಂಪುರ್ ವಿಧಾನಸಭಾ ಕ್ಷೇತ್ರದಲ್ಲಿ ನವoಬರ್ 3 ರಂದು ಉಪಚುನಾವಣೆ ನಡೆಯಲಿದೆ. 17 ಸೆಕೆಂಡುಗಳ ಈ ವಿಡಿಯೋ ದೃಶ್ಯವನ್ನು ಬಿಜೆಪಿ ಪ್ರಶ್ನಿಸಿದ್ದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಇದರ ಬೆನ್ನಿಗೆ ಚುನಾವಣಾ ಆಯೋಗವು ಕಾಂಗ್ರಸ್ ಅಭ್ಯರ್ಥಿ ಕೃಪಾ ಶಂಕರ್‌ರಿಗೆ ನೋಟಿಸು ನೀಡಿದೆ ಎಂಬುದಾಗಿ ವರದಿಯಾಗಿದೆ‌.